ಮುಂಬೈ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ: ಏಳು ಸಾವು ; 19 ಮಂದಿ ಗಾಯಾಳು

ಮುಂಬೈ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ: ಏಳು ಸಾವು ; 19 ಮಂದಿ ಗಾಯಾಳು

ಮುಂಬೈ: ಮುಂಬೈಯ ತಾಡ್‌ದೇವ್ ಪ್ರದೇಶದ ಭಾಟಿಯಾ ಆಸ್ಪತ್ರೆ ಸಮೀಪದ ಬಹು ಮಹಡಿ ಕಟ್ಟಡದಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟು 19 ಮಂದಿ ಗಾಯಗೊಂಡಿರುವುದಾಗಿ ಪ್ರಾಥಮಿಕ ವರದಿಗಳು ತಿಳಿಸಿವೆ.

      ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಆಂಬುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿವೆ. ಅಗ್ನಿಶಾಮಕ ದಳದ 13 ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರತವಾಗಿವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹೇಳಿಕೆ ಉಲ್ಲೇಖಿಸಿ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

     ಮುಂಬೈಯ ಭಾಟಿಯಾ ಆಸ್ಪತ್ರೆ ಬಳಿಯ 20 ಅಂತಸ್ತುಗಳುಲ್ಲ ಕಮಲ ಕಟ್ಟಡದ ಮೂರನೇ ಮಹಡಿಯಲ್ಲಿ ಈ ದುರಂತ ಸಂಭವಿಸಿರುವುದಾಗಿ ವರದಿಯಾಗಿದೆ.

ಸಾವಿನ ಸಂಖ್ಯೆ ಇನ್ನಷ್ಟೂ ಹೆಚ್ಚುವ ಸಂಭವವಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ