ಮುರುಡೇಶ್ವರ : ರಕ್ಷಣೆ ಮಾಡಿದ ಲೈಫ್ ಗಾರ್ಡ್ ಮೇಲೆ ಹಲ್ಲೆ

ಕಾರವಾರ: ಮದ್ಯದ ಅಮಲಿನಲ್ಲಿ ಸಮುದ್ರಕ್ಕಿಳಿದು ಅಲೆಯಲ್ಲಿ ಕೊಚ್ಚಿ ಹೋಗುತ್ತಿದ್ದವರನ್ನು ರಕ್ಷಣೆ ಮಾಡಿದ ಲೈಫ್ಗಾರ್ಡ್ಗಳ ಮೇಲೆಯೇ ಪ್ರವಾಸಿಗರು ಹಲ್ಲೆ ನಡೆಸಿದ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ.
ನೀಲಪ್ಪ ಬಾಲರೆಡ್ಡಿ ಮತ್ತು ಪ್ರಶಾಂತ ಹಳ್ಳಿಗಂಡಿ ರಕ್ಷಣೆಗೊಳಗಾಗಿ ಹಲ್ಲೆ ನಡೆಸಿದ ಪ್ರವಾಸಿಗರು ಎಂದು ತಿಳಿದು ಬಂದಿದೆ.
ನೀಲಪ್ಪ ಬಾಲರೆಡ್ಡಿ ಮತ್ತು ಪ್ರಶಾಂತ ಹಳ್ಳಿಗಂಡಿ ಗದಗ ಜಿಲ್ಲೆಯಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಆಗಮಿಸಿದ್ದು ಕಡಲತೀರದಲ್ಲಿ ಅಪಾಯ ಮಟ್ಟದಲ್ಲಿ ಈಜಾಡುತ್ತಿದ್ದರು.
ಲೈಫ್ಗಾರ್ಡ್ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ, ಲೆಕ್ಕಿಸದೆ ಮದ್ಯದ ಅಮಲಿನಲ್ಲಿದ್ದ ಕಾರಣ ಅಲೆಗೆ ಕೊಚ್ಚಿ ಹೋಗಿದ್ದಾರೆ.
ಇದನ್ನು ಗಮನಿಸಿದ ಲೈಫ್ಗಾರ್ಡ್ ತಕ್ಷಣವೇ ತೆರಳಿ ಪ್ರವಾಸಿಗರನ್ನು ರಕ್ಷಿಸಿ ಕರೆತಂದಿದ್ದರು.
ಆದರೆ ಮದ್ಯದ ನಶೆಯಲ್ಲಿದ್ದ ಇಬ್ಬರು ಪ್ರವಾಸಿಗರು ನಾವು ಎಕ್ಸ್ಪರ್ಟ್ ಈಜುಪಟುಗಳು. ನಮ್ಮನ್ನು ಯಾಕೆ ಎಳೆದು ತಂದಿದ್ದೀರಿ ಎಂದು ಲೈಫ್ಗಾರ್ಡ್ಗಳೊಂದಿಗೆ ವಾಗ್ವಾದಕ್ಕಿಳಿದು, ಲೈಫ್ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾರೆ.
ಘಟನೆಯಲ್ಲಿ ಲೈಫ್ ಗಾರ್ಡ್ಗೆ ಸಣ್ಣಪುಟ್ಟ ಗಾಯಗಳಾಗಿದೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ