ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ: ಶಿಕ್ಷಕನ ವಿರುದ್ಧ ಪ್ರತಿಭಟನೆ

ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ: ಶಿಕ್ಷಕನ ವಿರುದ್ಧ ಪ್ರತಿಭಟನೆ

ಸುಬ್ರಹ್ಮಣ್ಯ: ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಶಿಕ್ಷಕ ಗುರುರಾಜ್ ವಿರುದ್ಧ ಬುಧವಾರ ಸುಬ್ರಹ್ಮಣ್ಯದ ಎಸ್.ಎಸ್. ಪಿಯು ಕಾಲೇಜು ಆವರಣದಲ್ಲಿ ಸಾರ್ವಜನಿಕ ಪ್ರತಿಭಟನೆ ನಡೆಯಿತು. ಹಿರಿಯ ವಿದ್ಯಾರ್ಥಿ ಸಂಘದವರು ನೇತೃತ್ವ ವಹಿಸಿದ್ದರು.

      ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಈ ಶಿಕ್ಷಕ ಈ ಸಂಸ್ಥೆಗೆ ಬರಬಾರದು. ನಮ್ಮ ಮೈದಾನಕ್ಕೆ ಬಂದರೆ ನಾವು ಸುಮ್ಮನಿರುವುದಿಲ್ಲ. ಆಡಳಿತ ಮಂಡಳಿ ಈಗಾಗಲೇ ಅಮಾನತು ಮಾಡಿದ್ದಾಗಿ ಗೊತ್ತಾಗಿದೆ. ಆದರೆ ಅವನು ಮತ್ತೆ ಆ ವೃತ್ತಿಯಲ್ಲಿ ಇಲ್ಲಿ ಇರಬಾರದು ಎಂದು ರಾಜೇಶ್ ಎನ್.ಎಸ್ ಹೇಳಿದರು.

      ನ್ಯಾಯಾಂಗ ವ್ಯವಸ್ಥೆ ಬಗ್ಗೆ ಸಂಶಯ ವ್ಯಕ್ತಪಡಿಸುವ ಕಾಲ ಬಂದಿದೆ. ಮೂರೇ ದಿವಸದಲ್ಲಿ ಆರೋಪಿ ಹೊರ ಬಂದಿರುವ ವಿಚಾರ ದಿಗ್ಭ್ರಮೆ ಮೂಡಿಸಿದೆ’ ಎಂದು ಸುಧೀರ್ ಶೆಟ್ಟಿ ಮಾತನಾಡಿದರು. ಅಶೋಕ್ ನೆಕ್ರಾಜೆ, ಪುಲಸ್ಯ ರೈ, ಕಿಶೋರ ಶಿರಾಡಿ, ಕೃಷ್ಣಮೂರ್ತಿ ಭಟ್, ಸುಬ್ರಹ್ಮಣ್ಯ ಕುಳ, ಹರೀಶ್ ಇಂಜಾಡಿ ಮಾತನಾಡಿದರು.

      ಕಾಮುಕ ಶಿಕ್ಷಕ ಮತ್ತೆ ಸುಬ್ರಹ್ಮಣ್ಯಕ್ಕೆ ಕಾಲಿಡಬಾರದು. ಶಾಶ್ವತವಾಗಿ ಕೆಲಸದಿಂದ ತೆಗೆಯಬೇಕು ಎಂದು ಆಗ್ರಹಿಸಿದರು. ಪ್ರಶಾಂತ್ ಮಾಣಿಲ, ರಾಜೇಶ್ ಎನ್ ಎಸ್, ರವಿ ಕಕ್ಕೆಪದವು, ನೀಲಪ್ಪ, ರವೀಂದ್ರ ಕುಮಾರ್ ರುದ್ರಪಾದ, ಮೋಹನ್‌ ದಾಸ್ ರೈ, ಕೃಷ್ಣ ಮೂರ್ತಿ, ಸುಧೀರ್ ಶೆಟ್ಟಿ, ಸತೀಶ್ ಕೂಜುಗೋಡು, ಗೊಪಾಲ ಎಣ್ಣೆಮಜಲು, ಎಚ್.ಎಲ್ ವೆಂಕಟೇಶ್, ಲಲಿತಾ ಗುಂಡಡ್ಕ, ಸವಿತಾ ಭಟ್, ದಿವ್ಯಾ, ಭಾರತಿ ಮೂಕಮಲೆ‌ ಮೊದಲಾದವರು ಇದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ